ಪಟ್ಟೆ ಬಡಗನ್ನೂರು: ದಿನಾಂಕ 26-01-2026 ನೇ ಸೋಮವಾರದಂದು ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ನೂತನ ಕಟ್ಟಡದ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್ ಎ ಇವರು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಗಳ ಉಪಾಧ್ಯಕ್ಷರಾದ ಶ್ರೀ ಅಮೃತ ಕೃಷ್ಣ ಎನ್, ನಿರ್ದೇಶಕರಾದ ಶ್ರೀ ಗಣರಾಜ ಕುಂಬ್ಳೆ, ಶ್ರೀ ಜಿ ಪರಮೇಶ್ವರ ಭಟ್, ಶ್ರೀ ವೆಂಕಟಕೃಷ್ಣ ಶರ್ಮ, ಸಂಚಾಲಕರದ ಶ್ರೀ ವಿಘ್ನೇಶ್ ಹಿರಣ್ಯ ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿಯ ಆಧ್ಯಕ್ಷರುಗಳಾದ ಶ್ರೀ ಲಿಂಗಪ್ಪ ಗೌಡ ಮೂಡಿಕೆ, ಶ್ರೀ ಕೇಶವ ಪ್ರಸಾದ್ ನೀಲಗಿರಿ, ಶ್ರೀ ಸತೀಶ್ ಕೊಪ್ಪಳ ಉಪಸ್ಥಿತರಿದ್ದು ಶುಭವನ್ನು ಹಾರೈಸಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಮುಖ್ಯ ಗುರುಗಳಾದ ಶ್ರೀ ರಾಜಗೋಪಾಲ ಎನ್, ಪ್ರೌಢಶಾಲೆ ಮುಖ್ಯಗುರುಗಳಾದ ಶ್ರೀಮತಿ ಸುಮನಾ ಬಿ ಮಾತಾಜಿ, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಹಿರಿಯ ಶಿಕ್ಷಕರು, ಊರಿನ ಗಣ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.