ಪಟ್ಟೆ ಬಡಗನ್ನೂರು : ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಸೆಪ್ಟಂಬರ್ 5 ನೇ ತಾರೀಕಿ ನಂದು ನಡೆಯುವ ಶ್ರೀ ಕೃಷ್ಣ ಲೀಲಾಉತ್ಸವದ ಸಮಾಲೋಚನಾ ಸಭೆಯು ದಿನಾಂಕ 09/08/ 2026ನೇ ರವಿವಾರಂದು ಸಂಸ್ಥೆಯ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಶ್ರೀಮಾನ್ ಗೋಪಾಲಕೃಷ್ಣ ಭಟ್ಟರು “ಇದು ಕೇವಲ ಶಾಲೆಯ ಕಾರ್ಯಕ್ರಮ ಅಲ್ಲ. ನಮ್ಮ ಊರಿನ ಕಾರ್ಯಕ್ರಮ.ಎಲ್ಲರೂ ಸಂಪೂರ್ಣ ಸಹಕಾರವನ್ನು ನೀಡಬೇಕು”ಎಂದು ಕೋರಿದರು.
ಈ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಗಳ ನಿರ್ದೇಶಕರಾದ ಶ್ರೀಮಾನ್ ಗಣರಾಜ ಕುಂಬ್ಳೆ, ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ, ಪ್ರೌಢಶಾಲಾ SDMC ಅಧ್ಯಕ್ಷರಾದ ಶ್ರೀಲಿಂಗಪ್ಪ ಗೌಡ ಮೂಡಿಕೆ, ಶಾಲಾ ಮುಖ್ಯ ಗುರುಗಳು ಉಪಸ್ಥಿತರಿದ್ದರು. ಸಭೆಯಲ್ಲಿ ವಿವಿಧ ಉಪ ಸಮಿತಿಗಳ ಸಂಚಾಲಕರನ್ನು ನೇಮಿಸಲಾಯಿತು. ಸಭೆಯಲ್ಲಿ ಪಟ್ಟೆ ಪರಿಸರದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಸರ್ವ ಸದಸ್ಯರು, ಸಾಮಾಜಿಕ ಕಾರ್ಯಕರ್ತರು, ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಮಾನ್ ವಿಘ್ನೇಶ್ ಹಿರಣ್ಯರು ಸ್ವಾಗತಿಸಿ, ಧನ್ಯವಾದಗಳನ್ನು ಸಮರ್ಪಿಸಿದರು. ವಿದ್ಯಾಸಂಸ್ಥೆಗಳ ಶಿಕ್ಷಕರು ಸಹಕರಿಸಿದರು.