ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ FOCUS 360 ಶಿಕ್ಷಕರ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ

July 7, 2025
teachers-training

ಪಟ್ಟೆ ಬಡಗನ್ನೂರು : ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿ ದಿನಾಂಕ: 5-7-2025 ನೇ ಶನಿವಾರದಂದು ಶಿಕ್ಷಕರ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ನಡೆಯಿತು. ಪುತ್ತೂರಿನ ಹೆಸರಾಂತ ಉದ್ಯಮಿಗಳಾದ ಗೋಲೆಕ್ಸ್ ಎಂಟರ್ಪ್ರೈಸಸ್ ಸಂಸ್ಥೆಯ ಮಾಲೀಕರಾದ ಹಾಗೂ ಜೆ.ಸಿ.ಐ ತರಬೇತುದಾರರಾದ ಶ್ರೀಯುತ ಕೃಷ್ಣಮೋಹನ್ ಪಿ ಎಸ್ ಹಾಗೂ ಮತ್ತೊರ್ವ ತರಬೇತುದಾರರಾದ ಶ್ರೀಯುತ ಪಶುಪತಿ ಶರ್ಮ ಇವರು ತರಬೇತಿಯನ್ನು ನಡೆಸಿಕೊಟ್ಟರು. FOCUS 360 ಎಂಬ ಶೀರ್ಷಿಕೆಯಡಿ ನಡೆದ ಕಾರ್ಯಾಗಾರದಲ್ಲಿ ಶಿಕ್ಷಕ ವೃತ್ತಿಯ ಹಲವು ಮಜಲುಗಳು ಮತ್ತು ಸವಾಲುಗಳ ಹಾಗೂ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರು ಹೊಂದಿರಬೇಕಾದ ಅಗತ್ಯತೆಗಳ ಕುರಿತು ತರಬೇತುದಾರರು ಮಾಹಿತಿಯನ್ನು ನೀಡಿದರು. ಸಂಸ್ಥೆಯ ಸಂಚಾಲಕರಾದ ಶ್ರೀಮಾನ್ ವಿಘ್ನೇಶ್ ಹಿರಣ್ಯರವರು ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಸುಮನ ಬಿ ಮಾತಾಜಿ ವಂದಿಸಿದರು. ಕಾರ್ಯಗಾರದಲ್ಲಿ ಸಂಸ್ಥೆಯ ಎಲ್ಲಾ ಬೋಧಕ ವರ್ಗದವರು ಉಪಸ್ಥಿತರಿದ್ದರು.

Dwaraka Ad

Related Blog

Closing ceremony free vasantha vedic learning camp
ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಸಮಾರಂಭ
shri krishna vidya samsthe patte 10th standard
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ 2025- 26 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ
Ujjeevana is a RERA-approved senior living township in Kemmara, Karnataka — built for independent seniors and families seeking peace of mind.
Who Is Ujjeevana For? Senior Living Township in Karnataka