“ನಮ್ಮ ಸಾಧನೆಯ ಫಲ ದೀರ್ಘಕಾಲ ದೊರೆಯುವಂತಾಗಬೇಕು. ವಿದ್ಯಾರ್ಥಿಗಳು ಇದನ್ನು ಮನಗಂಡು ನಿರಂತರ ಅಧ್ಯಯನದಲ್ಲಿ ತೊಡಗಿ ಕೊಳ್ಳಬೇಕು” ಎಂದು ದ್ವಾರಕಾ ಪ್ರತಿಷ್ಠಾನದ ಕಾರ್ಯದರ್ಶಿ, ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ನಿರ್ದೇಶಕ ಗಣರಾಜ ಕುಂಬ್ಳೆ ನುಡಿದರು. ಅವರು ಬಡಗನ್ನೂರು ಪಟ್ಟೆಯ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆ(NMMS)ಯ ಪೂರ್ವ ತಯಾರಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸಂಸ್ಥೆಯ ಮುಖ್ಯ ಗುರುಗಳಾದ ಶ್ರೀಮತಿ ಸುಮನಾ ಮಾತಾಜಿ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಗೆ ಹಾಜರಾಗುವ ಎಂಟನೇ ತರಗತಿಯ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಹಾಜರಿದ್ದರು. ಶ್ರೀಮತಿ ಭವಿತಾ ಮಾತಾಜಿಯವರು ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದಗಳನ್ನು ಅರ್ಪಿಸಿದರು.
