ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ವತಿಯಿಂದ ರಸ್ತೆ ಬಾರಿಕೇಡ್ ಅಳವಡಿಕೆ

June 19, 2025
Barricade

ಪಟ್ಟೆ ಬಡಗನ್ನೂರು: ಇಲ್ಲಿನ ಕೌಡಿಚ್ಚಾರು- ಮುಡಿಪುನಡ್ಕ-ಬೆಟ್ಟಂಪಾಡಿ ರಸ್ತೆಯ ಪಟ್ಟೆಯಲ್ಲಿ ರಸ್ತೆ ತಡೆ ಬಾರಿಕೇಡ್ಗಳನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ವತಿಯಿಂದ ಅಳವಡಿಸಲಾಯಿತು. ಈಶ್ವರಮಂಗಲ ಆರಕ್ಷಕ ಹೊರಠಾಣಾ ವಲಯದ ಈ ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಈ ಕ್ರಮವನ್ನು ಕೈಗೊಳ್ಳಲಾಯಿತು. ರಸ್ತೆ ಬಾರಿಕೇಡ್ ಅಳವಡಿಕೆಯಿಂದಾಗಿ ವಿದ್ಯಾರ್ಥಿಗಳು ಸುರಕ್ಷಿತವಾಗಿ ರಸ್ತೆ ದಾಟಬಹುದು ಹಾಗೂ ಎಲ್ಲಾ ವಾಹನಗಳು ಶಾಲಾ ಪ್ರದೇಶದಲ್ಲಿ ನಿಧಾನವಾಗಿ ಚಲಿಸುವಂತಾಗಲು ಅನುಕೂಲವಾಗಲಿದೆ ಎಂದು ವಿದ್ಯಾಸಂಸ್ಥೆಗಳ ಪ್ರೌಢ ಶಾಲಾ ವಿಭಾಗದ ಮುಖ್ಯಗುರುಗಳಾದ ಶ್ರೀಮತಿ ಸುಮನಾ ಬಿ ಮಾತಾಜಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಥೆಗಳ ಸಂಚಾಲಕರಾದ ಶ್ರೀಮಾನ್ ವಿಘ್ನೇಶ್ ಹಿರಣ್ಯ, ಪ್ರಾಥಮಿಕ ವಿಭಾಗದ ಮುಖ್ಯಗುರುಗಳಾದ ಶ್ರೀಮಾನ್ ರಾಜಗೋಪಾಲ ಎನ್, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮಾನ್ ಮೋನಪ್ಪ ಎಂ ಉಪಸ್ಥಿತರಿದ್ದರು.

Dwaraka Ad

Related Blog

ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಶ್ರೀ ರಾಮನವಮಿ ಆಚರಣೆ ಮತ್ತು ಆಕಾಶಕ್ಕೆ ಏಣಿ ಬೇಸಿಗೆ ಶಿಬಿರ
ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಯ Inspire Award ಮಾದರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
Science Exhibition National Science Day
ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನ