ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ವತಿಯಿಂದ ರಸ್ತೆ ಬಾರಿಕೇಡ್ ಅಳವಡಿಕೆ

June 19, 2025
Barricade

ಪಟ್ಟೆ ಬಡಗನ್ನೂರು: ಇಲ್ಲಿನ ಕೌಡಿಚ್ಚಾರು- ಮುಡಿಪುನಡ್ಕ-ಬೆಟ್ಟಂಪಾಡಿ ರಸ್ತೆಯ ಪಟ್ಟೆಯಲ್ಲಿ ರಸ್ತೆ ತಡೆ ಬಾರಿಕೇಡ್ಗಳನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ವತಿಯಿಂದ ಅಳವಡಿಸಲಾಯಿತು. ಈಶ್ವರಮಂಗಲ ಆರಕ್ಷಕ ಹೊರಠಾಣಾ ವಲಯದ ಈ ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಈ ಕ್ರಮವನ್ನು ಕೈಗೊಳ್ಳಲಾಯಿತು. ರಸ್ತೆ ಬಾರಿಕೇಡ್ ಅಳವಡಿಕೆಯಿಂದಾಗಿ ವಿದ್ಯಾರ್ಥಿಗಳು ಸುರಕ್ಷಿತವಾಗಿ ರಸ್ತೆ ದಾಟಬಹುದು ಹಾಗೂ ಎಲ್ಲಾ ವಾಹನಗಳು ಶಾಲಾ ಪ್ರದೇಶದಲ್ಲಿ ನಿಧಾನವಾಗಿ ಚಲಿಸುವಂತಾಗಲು ಅನುಕೂಲವಾಗಲಿದೆ ಎಂದು ವಿದ್ಯಾಸಂಸ್ಥೆಗಳ ಪ್ರೌಢ ಶಾಲಾ ವಿಭಾಗದ ಮುಖ್ಯಗುರುಗಳಾದ ಶ್ರೀಮತಿ ಸುಮನಾ ಬಿ ಮಾತಾಜಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಥೆಗಳ ಸಂಚಾಲಕರಾದ ಶ್ರೀಮಾನ್ ವಿಘ್ನೇಶ್ ಹಿರಣ್ಯ, ಪ್ರಾಥಮಿಕ ವಿಭಾಗದ ಮುಖ್ಯಗುರುಗಳಾದ ಶ್ರೀಮಾನ್ ರಾಜಗೋಪಾಲ ಎನ್, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮಾನ್ ಮೋನಪ್ಪ ಎಂ ಉಪಸ್ಥಿತರಿದ್ದರು.

Dwaraka Ad

Related Blog

class 10 exam preparation training shree krishna
ಶ್ರೀ ಕೃಷ್ಣ ವಿದ್ಯಾಸಂಸ್ಥೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ ಕಾರ್ಯಕ್ರಮ
district level yogasana competition
ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ : ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯ ವಿದ್ಯಾರ್ಥಿಗಳಿಗೆ ಬಹುಮಾನ
Dwarakotsava 2026
ದ್ವಾರಕೋತ್ಸವ – 2026