ಪಟ್ಟೆ ಬಡಗನ್ನೂರು:3A ಸೈಡ್ ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಹಾಗೂ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಒಂದು ವಾರಗಳ ತರಬೇತಿ ಶಿಬಿರವು ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಕ್ರೀಡಾಂಗಣದಲ್ಲಿ ಜರಗಿತು. ದಿನಾಂಕ 6 ರಿಂದ 10ರ ತನಕ ಮಹಾರಾಷ್ಟ್ರದ ನಾಸಿಕ್ ಒಳಾಂಗಣ ಕ್ರೀಡಾಂಗಣದಲ್ಲಿ ರಾಷ್ಟ್ರಮಟ್ಟದ 3A ವಾಲಿಬಾಲ್ ಪಂದ್ಯಾಟ ನಡೆಯಲಿರುವುದು.ಈ ತರಬೇತಿಯಲ್ಲಿ ಬೆಂಗಳೂರು, ಮೈಸೂರು, ಉಡುಪಿ, ಕಾರ್ಕಳ, ಮಂಡ್ಯ, ಹಾಸನ ಮತ್ತು ದಕ್ಷಿಣ ಜಿಲ್ಲೆಯ ಆಯ್ಕೆ ಆಟಗಾರರು ಈ ತರಬೇತಿ ಪಂದ್ಯಾಟದಲ್ಲಿ ಭಾಗವಹಿಸುತ್ತಾರೆ.ಈ ಪಂದ್ಯಾಟದಲ್ಲಿ ಭಾಗವಹಿಸಲು ತೆರಳುತ್ತಿರುವ ರಾಜ್ಯ ತಂಡಕ್ಕೆ ತರಬೇತಿದಾರರಾಗಿ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಯುತ ಮೋನಪ್ಪ ಎಮ್, ಶ್ರೀಯುತ ಗೋಪಿನಾಥ್, ಅಮಮ್ಸ್ ಮೂಡಡ್ಕದ ದೈಹಿಕ ಶಿಕ್ಷಣ ಶಿಕ್ಷಕರಾದ ರಫೀಕ್ ಆತೂರು ತರಬೇತಿಯನ್ನು ನೀಡಿರುತ್ತಾರೆ. ಈ ತರ ಬೇತಿಯು ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್ ಇವರ ನೇತೃತ್ವದಲ್ಲಿ ನಡೆಯಿತು. ಈ ತರಬೇತಿಗೆ ಪ್ರೋತ್ಸಾಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.