ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆಂಗ್ಲ ಮಾಧ್ಯಮ ವಿಭಾಗದ ಪೋಷಕರ ಸಭೆ

October 21, 2025
parents meeting of sri krishna educational institutions english medium

ಬಡಗನ್ನೂರು:- ದಿನಾಂಕ 18.10.2025 ನೇ ಶನಿವಾರದಂದು ಪುತ್ತೂರು ದ್ವಾರಕ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಶ್ರೀ ಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ 2025- 26 ನೇ ಸಾಲಿನ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಯುತ ವಿಘ್ನೇಶ್ ಹಿರಣ್ಯ ಇವರು ವಹಿಸಿ, ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಭಾಷೆಯ ಅಗತ್ಯ ಎಲ್ಲರಿಗೂ ಇದೆ, ಆದರೆ ಒಟ್ಟಿಗೆ ಮಕ್ಕಳಿಗೆ ನಮ್ಮ ನೆಲದ ಭಾಷೆ, ಸಂಸ್ಕೃತಿ, ಆಚರಣೆಯನ್ನು ತಿಳಿಸಿಕೊಡುವ ಕಾರ್ಯವನ್ನು ಶಿಕ್ಷಕರು ಮತ್ತು ಪೋಷಕರು ಮಾಡಿದರೆ ಮಕ್ಕಳು ಸುಸಂಸ್ಕೃತ ವಿದ್ಯಾರ್ಥಿಯಾಗಿ ಸಮಾಜಕ್ಕೆ ಆಸ್ತಿಯಾಗುತ್ತಾರೆ ಎಂದು ತಿಳಿಸಿದರು. ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಶ್ರೀಮಾನ್ ರಾಜಗೋಪಾಲ್ ಇವರು ಪೋಷಕರ ಸಭೆಯ ಮಹತ್ವವನ್ನು ಸಭೆಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಯುತ ಸತೀಶ್ ಕೊಪ್ಪಳ ಉಪಸ್ಥಿತರಿದ್ದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನೆರೆದಿರುವ ಪೋಷಕರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಆಂಗ್ಲ ಮಾಧ್ಯಮ ವಿಭಾಗದ ವಿಭಾಗದ ಮಾತಾಜಿ ಅಶ್ವಿನಿ ಪಿ ಕೆ ವಂದಿಸಿ ಆಂಗ್ಲ ಮಾಧ್ಯಮ ವಿಭಾಗದ ಮಾತಾಜಿ ಭಾರತಿ ಪಿ ಕಾರ್ಯಕ್ರಮವನ್ನು ನಿರೂಪಿಸಿದರು. ಆಂಗ್ಲ ಮಾಧ್ಯಮ ಶಾಲಾ ವಿಭಾಗದ ಶಿಕ್ಷಕರು ಮತ್ತು ಶಿಕ್ಷಕೇತರ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Dwaraka Ad

Related Blog

12th International Yoga Day Celebration at Shrikrishna Educational Institutions
ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನ ಆಚರಣೆ
Ujjivana Inauguration
ಉಜ್ಜೀವನ ಲೋಕಾರ್ಪಣ
collective bhoomi pooja at ujjivana layout
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ