ಪಟ್ಟೆ ಬಡಗನ್ನೂರು: ದಿನಾಂಕ 30/07/2026ರಂದು ಕಲಬುರ್ಗಿಯಲ್ಲಿ ನಡೆದ ರಾಜ್ಯಮಟ್ಟದ ವಿದ್ಯಾಭಾರತಿ ಕ್ರೀಡಾಕೂಟದಲ್ಲಿ 14ರ ವಯೋಮಾನದ ಬಾಲಕಿಯರ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಹರ್ಷಿಕಾ ಎಸ್. ಇವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವಳು ಬಡಕ್ಕೋಡಿ ಕೂಸಪ್ಪ ಮತ್ತು ಆಶಾಲತಾ ದಂಪತಿಗಳ ಸುಪುತ್ರಿ. ಇವಳಿಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಸರ್ವದಸ್ಯರು ಹಾಗೂ ಶಾಲಾ ಮುಖ್ಯ ಗುರುಗಳು, ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿರುತ್ತಾರೆ.