ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಅಶ್ವತ್ಥ ಕಟ್ಟೆ ಸಮರ್ಪಣೆ ; ದೇವಳದಿಂದ ಗೌರವಾರ್ಪಣೆ

May 21, 2026
Puttur Mahalingeshwara Temple Ashwatha Katte

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಬಳಿ ನೂತನವಾಗಿ ಪುನರ್ನಿರ್ಮಾಣಗೊಂಡ ಶಿಲಾಮಯ ಕಟ್ಟೆಯ ಲೋಕಾರ್ಪಣೆ ಮತ್ತು ದಾನಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ದಿನಾಂಕ 20-05-2026ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಶಿಲಾಮಯ ಕಟ್ಟೆ ನಿರ್ಮಾಣಗೊಳ್ಳಲು ಧನರೂಪದಲ್ಲಿ ಸಹಕರಿಸಿದ ದ್ವಾರಕಾ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಗೋಪಾಲಕೃಷ್ಣ ಭಟ್ಟ ಅರ್ತ್ಯಡ್ಕ ಅವರು ಶ್ರೀ ಕ್ಷೇತ್ರಕ್ಕೆ ಕಟ್ಟೆಯನ್ನು ಸಮರ್ಪಣೆ ಮಾಡಿದರು. ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಪಂಜಿಗುಡ್ಡೆ ಈಶ್ವರ ಭಟ್ಟರು ದಾನಿಗಳಿಗೆ ಶಲ್ಯವನ್ನು ಹೊದೆಸಿ ಗೌರವ ಸಮರ್ಪಿಸಿದರು. ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ವೇ. ಮೂ. ವಸಂತ ಕೆದಿಲಾಯ ದೇವರ ಪ್ರಸಾದವನ್ನು ನೀಡಿದರು. ಈ ಸಂದರ್ಭದಲ್ಲಿ ಶ್ರೀ ದೇವರಿಗೆ ಎಳ್ಳೆಣ್ಣೆ ಸಮರ್ಪಣೆ, ತುಪ್ಪದ ದೀಪದ ಸೇವೆಯನ್ನು ಶ್ರೀ ಗೋಪಾಲಕೃಷ್ಣ ಭಟ್ಟರು ನೆರವೇರಿಸಿದರು. ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಶ್ರೀ ಅಮೃತಕೃಷ್ಣ ಎನ್. ಸೇರಿದಂತೆ, ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶ್ರೀಮತಿ ನಳಿನಿ ಪಿ. ಶೆಟ್ಟಿ, ಶ್ರೀ ಸುಭಾಷ್ ರೈ ಬೆಳ್ಳಿಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

Dwaraka Constructions Ad

Related Blog

karnataka volleyball team secures national runner up
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡ ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ಸ್ಥಾನ
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಗಳ ವಿದ್ಯಾರ್ಥಿಗಳು ಕ್ಷೇತ್ರೀಯ ಮಟ್ಟದ ವಿದ್ಯಾ ಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
guru prsshasti award fetured image
ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಶ್ರೀಕೃಷ್ಣ ಲೀಲೆ 2026 ಮತ್ತು ಸಾಂದೀಪನಿ ಗುರುಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ