ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ರಾಮಾಯಣ ಪರೀಕ್ಷೆ

August 31, 2025
Ramayana Examination at Sri Krishna Educational Institutions, Puttur

ಪಟ್ಟೆ ಬಡಗನ್ನೂರು: ಇಲ್ಲಿನ ದ್ವಾರಕಾ ಪ್ರತಿಷ್ಠಾನ(ರಿ) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ 2025-26ನೇ ಸಾಲಿನ ರಾಮಾಯಣ ಪರೀಕ್ಷೆಯು ದಿನಾಂಕ 31/08/2025 ರ ಆದಿತ್ಯವಾರದಂದು ನಡೆಯಿತು. ಕೌಡಿಚ್ಚಾರು, ಪಟ್ಟೆ, ಬೆಟ್ಟಂಪಾಡಿ, ಸುಳ್ಯಪದವು ಹಾಗೂ ಈಶ್ವರಮಂಗಲ ಪರಿಸರದ ಸುಮಾರು ಹತ್ತಕ್ಕೂ ಹೆಚ್ಚು ಶಾಲೆಗಳ ಸುಮಾರು 53 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. 5 ರಿಂದ 8ನೇತರಗತಿಯ ವಿದ್ಯಾರ್ಥಿಗಳಿಗೆ ರಾಮಾಯಣದ ಕುರಿತ ಆಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ದ್ವಾರಕಾ ಪ್ರತಿಷ್ಠಾನವು ಈ ಪರೀಕ್ಷೆಯನ್ನು ವಿಶೇಷವಾಗಿ ಆಯೋಜಿಸಿದೆ.

ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಶಿಕ್ಷಕರು ಈ ಪರೀಕ್ಷೆಯಲ್ಲಿ ಸಹಕರಿಸಿದರು. ಸಂಸ್ಥೆಗಳ ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಶ್ರೀ ರಾಜಗೋಪಾಲ ಎನ್ ಉಪಸ್ಥಿತರಿದ್ದರು.

Dwaraka Ad

Related Blog

12th International Yoga Day Celebration at Shrikrishna Educational Institutions
ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನ ಆಚರಣೆ
Ujjivana Inauguration
ಉಜ್ಜೀವನ ಲೋಕಾರ್ಪಣ
collective bhoomi pooja at ujjivana layout
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ