ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನ

March 2, 2026
Science Exhibition National Science Day

ಪಟ್ಟೆ ಬಡಗನ್ನೂರು : ದಿನಾಂಕ 28/02/2026 ಶನಿವಾರದಂದು ದ್ವಾರಕಾ ಪ್ರತಿಷ್ಠಾನ (ರಿ.)ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನ ಜರುಗಿತು. ಈ ಕಾರ್ಯಕ್ರಮವನ್ನು ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಯುತ ವಿಘ್ನೇಶ್ ಹಿರಣ್ಯರವರು ಉದ್ಘಾಟಿಸಿ, ಈ ವಿಜ್ಞಾನ ವಸ್ತು ಪ್ರದರ್ಶನವು ವೈಜ್ಞಾನಿಕ ದೃಷ್ಟಿಕೋನವನ್ನು ಬೆಳೆಸಲು ಸಹಕಾರಿಯಾಗಿದೆ ಎಂದರು. ಸಂಸ್ಥೆಯ ವಿವಿಧ ತರಗತಿಗಳ ಸುಮಾರು 20ಕ್ಕೂ ಹೆಚ್ಚು ತಂಡಗಳ ವಿದ್ಯಾರ್ಥಿಗಳು ವಿಜ್ಞಾನ ಮಾದರಿ ಪ್ರಾತ್ಯಕ್ಷತೆಗಳನ್ನು ಪ್ರದರ್ಶಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಶಾಲಾ ಮುಖ್ಯ ಗುರುಗಳಾದ ಶ್ರೀಮಾನ್ ರಾಜಗೋಪಾಲ ಎನ್, ಪ್ರೌಢಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸುಮನಾ ಬಿ ಮಾತಾಜಿಯವರು ಉಪಸ್ಥಿತರಿದ್ದರು. 9ನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ಜೀವಿತ ಎಚ್ ವಿಜ್ಞಾನ ದಿನಾಚರಣೆ ಮಹತ್ವವನ್ನು ತಿಳಿಸಿದರು. 9ನೇ ತರಗತಿಯ ವಿಸ್ಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರೌಢಶಾಲಾ ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ ಭವಿತಾ ಮಾತಾಜಿರವರು ಮಾರ್ಗದರ್ಶನ ನೀಡಿದರು. ಸಂಸ್ಥೆಯ ಎಲ್ಲಾ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.

Dwaraka Ad

Related Blog

volleyball-team
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಗಳ ವಿದ್ಯಾರ್ಥಿಗಳು ರಾಜ್ಯಮಟ್ಟದ ವಿದ್ಯಾ ಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ
consultation meeting for sri krishna leela programme
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಶ್ರೀ ಕೃಷ್ಣ ಲೀಲಾ ಕಾರ್ಯಕ್ರಮದ ಸಮಾಲೋಚನಾ ಸಭೆ
volleyball-team
ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ