ಬಡಗನ್ನೂರು: ಬೀದರ್ ಸರಸ್ವತಿ ವಿದ್ಯಾ ಸಂಸ್ಥೆಯಲ್ಲಿ ನಡೆದ 14 ರ ವಯೋಮಾನದ ರಾಜ್ಯ ಮಟ್ಟದ ವಿದ್ಯಾಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ 8ನೇ ತರಗತಿ ವಿದ್ಯಾರ್ಥಿಗಳಾದ ಅದ್ವಿತ್ ಶೆಟ್ಟಿ, ಪ್ರಖ್ಯಾತ್, ಆದಿ ಕೆ.ಎ,ಸೃಜನ್ ಇವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಹೈದರಾಬಾದ್ ನಲ್ಲಿ ನಡೆಯುವ ಕ್ಷೇತ್ರಿಯ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಅಯ್ಕೆಯಾಗಿರುತ್ತದೆ. 17ರ ವಯೋಮಾನದ ಪಂದ್ಯಾಟದಲ್ಲಿ 10ನೇ ತರಗತಿಯ ಸಾಥ್ವಿ ಆಯ್ಕೆಯಾಗಿರುತ್ತಾರೆ. ಆಯ್ಕೆಗೊಂಡಿರುವ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿದಾರರಿಗೆ ಪಟ್ಟೆ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಶಾಲಾ ಮುಖ್ಯ ಗುರುಗಳು ಮತ್ತು ಶಿಕ್ಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.