ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ

May 12, 2025
Vasanta Vedapata

11-5-2025 ರಂದು ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ ಮುಕ್ರುಂಪಾಡಿ ಗೋಕುಲ ಬಡಾವಣೆಯ ನಂದಗೋಕುಲ ವೇದಿಕೆಯಲ್ಲಿ ನಡೆಯಿತು.

ವಿದ್ಯಾರ್ಥಿಗಳಿಂದ ವೈದಿಕ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ಅರ್ತ್ಯಡ್ಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ” ನಾವು ಒಳ್ಳೆಯ ವಿಚಾರಗಳನ್ನು ಗಳಿಸುವತ್ತ ಮನಮಾಡಬೇಕು ” ಎಂದು ನುಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಭಾರತೀಯ ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿದ್ಯಾ ಎಸ್ ಅವರು ” ಮಕ್ಕಳು ಕುತೂಹಲದಿಂದ ಕೇಳುವ ಪ್ರಶ್ನೆಗಳಿಗೆ ಪೋಷಕರು ಉತ್ತರಿಸಿ ಪ್ರೋತ್ಸಾಹಿಸಬೇಕು ” ಎಂದರು.

ಧರ್ಮಭಾರತೀ ಪತ್ರಿಕೆಯ ಪ್ರಾಕ್ತನ ಪ್ರಧಾನ ಸಂಪಾದಕರಾದ ಮಹೇಶ್ ಎಳ್ಯಡ್ಕ ಅವರು ಮಾತನಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ದ್ವಾರಕಾ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಹರಿಕೃಷ್ಣ ಭಟ್ ಅರ್ತ್ಯಡ್ಕ ಅವರು ಅಧ್ಯಕ್ಷೀಯ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಕೃಷ್ಣ ಭಟ್ ಪ್ರತಿಷ್ಠಾನ ಚೂಂತಾರು ಇದರ ಕಾರ್ಯದರ್ಶಿಗಳು ಹಾಗೂ ವೇದಪಾಠ ಶಿಬಿರದ ಮುಖ್ಯಗುರುಗಳಾದ ವೇ. ಮೂ. ಸಿ. ಶಿವಪ್ರಸಾದ ಭಟ್ ಚೂಂತಾರು, ದ್ವಾರಕಾ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಗಣರಾಜ ಕುಂಬ್ಳೆ, ನಿವೃತ್ತ ಆರೋಗ್ಯ ನಿರೀಕ್ಷಕರು ಹಾಗೂ ಯೋಗ ಶಿಕ್ಷಕರಾದ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವೈದಿಕ ವಿದ್ವಾಂಸರಾದ ವೇ.ಮೂ. ಎತ್ತುಕಲ್ಲು ನಾರಾಯಣ ಭಟ್ ಅವರನ್ನು ಸನ್ಮಾನಿಸಲಾಯಿತು. ಶಿಬಿರದ ವೇದಾಧ್ಯಾಪಕರಾದ ವೇ.ಮೂ ಸಿ. ಶಿವಪ್ರಸಾದ ಭಟ್ ಚೂಂತಾರು, ನವೀನಕೃಷ್ಣ ಎಸ್. ಉಪ್ಪಿನಂಗಡಿ, ಹೇಮಂತ ರಾಜ್ ಪಾಂಡೆ ಜಾರ್ಖಂಡ್, ಶಿವಶರಣ ಭಟ್ ಆರ್ಲಪದವು, ರಾಜಾರಾಮ ಶಾಸ್ತ್ರಿ ಅವರಿಗೆ ಗುರುವಂದನೆ ನಡೆಯಿತು. ಹಾಗೆಯೇ ಸಂಯೋಜಕರಾದ ಶ್ರೀಮತಿ ಶ್ವೇತ ರಾಮಮೋಹನ್ ಹಾಗೂ ಶಿಬಿರವು ಯಶಸ್ವಿಯಾಗುವಲ್ಲಿ ಸಹಕರಿಸಿದ ಎಲ್ಲರನ್ನೂ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರ ಮಾರ್ಗದರ್ಶನದಲ್ಲಿ ಶಿಬಿರಾರ್ಥಿಗಳಿಂದ ಯೋಗದ ಪ್ರಾತ್ಯಕ್ಷಿಕೆ ನೆರವೇರಿತು. ಗಣ್ಯರನ್ನು ಹಾಗೂ ನೆರೆದ ಸರ್ವರನ್ನೂ ವಿದ್ಯಾರ್ಥಿ ಅಭಿನವ ಕಶ್ಯಪ್ ಸ್ವಾಗತಿಸಿ, ಸವ್ಯಸಾಚಿ ಭಟ್ ವಂದಿಸಿದರು. ಮೈತ್ರೇಯ ರಾಮ ಡಿ. ಇವರು ಕಾರ್ಯಕ್ರಮವನ್ನು ನಿರೂಪಿಸಿದರು

Dwaraka Ad

Related Blog

ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಗಳ ವಿದ್ಯಾರ್ಥಿಗಳು ಕ್ಷೇತ್ರೀಯ ಮಟ್ಟದ ವಿದ್ಯಾ ಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
guru prsshasti award fetured image
ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಶ್ರೀಕೃಷ್ಣ ಲೀಲೆ 2026 ಮತ್ತು ಸಾಂದೀಪನಿ ಗುರುಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ
training camp for the volleyball team
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡಕ್ಕೆ ಒಂದು ವಾರಗಳ ಕಾಲ ತರಬೇತಿ ಶಿಬಿರ