ಬಡಗನ್ನೂರು : ವಿದ್ಯಾ ಭಾರತಿ ವಿಜ್ಞಾನ ಕೇಂದ್ರ ಹೈದರಾಬಾದ್ ಇಲ್ಲಿ ನಡೆದ 14 ರ ವಯೋಮಾನದ ಕ್ಷೇತ್ರೀಯ ಮಟ್ಟದ ವಿದ್ಯಾಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ 8ನೇ ತರಗತಿ ವಿದ್ಯಾರ್ಥಿಗಳಾದ ಅದ್ವಿತ್ ಶೆಟ್ಟಿ, ಪ್ರಖ್ಯಾತ್, ಆದಿ ಕೆ.ಎ,ಸೃಜನ್ ಇವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಗ್ವಾಲಿಯರ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಅಯ್ಕೆಯಾಗಿರುತ್ತಾರೆ. 17 ರ ವಯೋಮಾನದ ಪಂದ್ಯಾಟದಲ್ಲಿ 10ನೇ ತರಗತಿಯ ಸಾಥ್ವಿ ಆಯ್ಕೆಯಾಗಿರುತ್ತಾರೆ. ಆಯ್ಕೆಗೊಂಡಿರುವ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿದಾರರಿಗೆ ಪಟ್ಟೆ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಶಾಲಾ ಮುಖ್ಯ ಗುರುಗಳು ಮತ್ತು ಶಿಕ್ಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.